TSK

TSK · ಪ್ರಕಟನೆ 21:14

مراجع Treasury of Scripture Knowledge في ಕನ್ನಡ IRV.

العودة إلى المقطع

ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.

‹ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು›‹ಪೇತ್ರನು, ಈ›‹ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.›

ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.

ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.

ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.