TSK

TSK · ಪ್ರಕಟನೆ 21:4

مراجع Treasury of Scripture Knowledge في ಕನ್ನಡ IRV.

العودة إلى المقطع

ಮನುಷ್ಯನು ಬರೀ ಉಸಿರೇ, ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.

ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.

¶ ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.