“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
TSK
TSK · ರೋಮಾಪುರದವರಿಗೆ 1:5
مراجع Treasury of Scripture Knowledge في ಕನ್ನಡ IRV.
ಕರ್ತನು ಅವನಿಗೆ, ‹“ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.›
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.
ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.
ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.