ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
TSK
TSK · ರೋಮಾಪುರದವರಿಗೆ 10:2
مراجع Treasury of Scripture Knowledge في ಕನ್ನಡ IRV.
ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
‹ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.›
“ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.
¶ ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.
ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.
ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ.
ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.
ಇವನು ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಮತ್ತು ಹಿರಿಯಾಪೋಲಿಯದವರಿಗಾಗಿಯೂ ಬಹಳ ಪ್ರಯಾಸ ಪಡುತ್ತಾನೆಂದು ನಾನು ಸಾಕ್ಷಿಹೇಳುತ್ತೇನೆ.