TSK

TSK · ರೋಮಾಪುರದವರಿಗೆ 10:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.

ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.

ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;

ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,

¶ ‹“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು›‹ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು›‹ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು.›

‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›

¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.