ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು.
TSK
TSK · ರೋಮಾಪುರದವರಿಗೆ 10:3
مراجع Treasury of Scripture Knowledge في ಕನ್ನಡ IRV.
ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಆಕಾಶಮಂಡಲವನ್ನು ನೋಡಿರಿ, ಕೆಳಗೆ ಭೂಮಂಡಲವನ್ನು ದೃಷ್ಟಿಸಿರಿ. ಆಕಾಶವು ಹೊಗೆಯಂತೆ ಚದರಿ ಹೋಗುವುದು, ಭೂಮಿಯು ಹಳೆಯ ವಸ್ತ್ರದಂತಾಗುವುದು, ಭೂನಿವಾಸಿಗಳು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ವಿಮೋಚನಕ್ರಿಯೆಯೋ ಶಾಶ್ವತವಾಗಿ ನಿಲ್ಲುವುದು, ನನ್ನ ರಕ್ಷಣಾಧರ್ಮದ ಕಾರ್ಯಕ್ಕೆ ಭಂಗವೇ ಇರುವುದಿಲ್ಲ.
ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು.
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
‹ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.›
¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
¶ ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು.
ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.
¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,