ಅವರ ಕಣ್ಣು ಮೊಬ್ಬಾಗಿ ಕಾಣದೆ ಹೋಗಲಿ; ಅವರ ನಡುವು ಯಾವಾಗಲೂ ನಡಗುತ್ತಿರಲಿ.
TSK
TSK · ರೋಮಾಪುರದವರಿಗೆ 11:10
مراجع Treasury of Scripture Knowledge في ಕನ್ನಡ IRV.
ನೀವೆಲ್ಲರೂ ಕತ್ತಿಗೆ ಬೀಳುವಿರಿ, ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ, ಏಕೆಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಿದರೂ ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡಿರಿ.”
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.