TSK

TSK · ರೋಮಾಪುರದವರಿಗೆ 11:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.

ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.

ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.

¶ ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.

ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.

ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,

ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.

ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

¶ ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.

ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.