TSK

TSK · ರೋಮಾಪುರದವರಿಗೆ 11:25

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.

ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ, ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

¶ “ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.

¶ ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.

¶ ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.

ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

¶ ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.

ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.

¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.

¶ ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.