TSK

TSK · ರೋಮಾಪುರದವರಿಗೆ 11:6

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.

ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.

ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.

ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.

ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,