ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
TSK
TSK · ರೋಮಾಪುರದವರಿಗೆ 12:17
مراجع Treasury of Scripture Knowledge في ಕನ್ನಡ IRV.
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?
ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.
ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.