TSK

TSK · ರೋಮಾಪುರದವರಿಗೆ 13:1

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.

ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.

ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.

ಅದಕ್ಕೆ ಯೇಸು, ‹“ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ”› ಎಂದು ಉತ್ತರ ಕೊಟ್ಟನು.

¶ ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,

ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,

ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.