ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.
TSK
TSK · ರೋಮಾಪುರದವರಿಗೆ 13:12
مراجع Treasury of Scripture Knowledge في ಕನ್ನಡ IRV.
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
¶ “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
¶ ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.
ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ಇದಲ್ಲದೆ ಅವನು ನನಗೆ ಈ ಪುಸ್ತಕದಲ್ಲಿರುವ “ಪ್ರವಾದನಾ ವಾಕ್ಯಗಳಿಗೆ ಮುದ್ರೆಹಾಕಬೇಡ. ಏಕೆಂದರೆ ಇವು ನೆರವೇರುವ ಕಾಲವು ಸಮೀಪವಾಗಿದೆ.