TSK

TSK · ರೋಮಾಪುರದವರಿಗೆ 13:4

مراجع Treasury of Scripture Knowledge في ಕನ್ನಡ IRV.

العودة إلى المقطع

ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.

ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.

“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.

ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.

ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.

ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”

ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.

¶ ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?

ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.

ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.