TSK

TSK · ರೋಮಾಪುರದವರಿಗೆ 14:10

مراجع Treasury of Scripture Knowledge في ಕನ್ನಡ IRV.

العودة إلى المقطع

ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.

¶ “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.

ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.

ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?

ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.

¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.