¶ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
TSK
TSK · ರೋಮಾಪುರದವರಿಗೆ 15:14
مراجع Treasury of Scripture Knowledge في ಕನ್ನಡ IRV.
ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.
ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.
ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.
ನಿನ್ನ ವಿಧೇಯತೆಯಲ್ಲಿ ಭರವಸೆವುಳ್ಳವನಾಗಿ ಈ ಪತ್ರಿಕೆಯನ್ನು ನಿನಗೆ ಬರೆದಿದ್ದೇನೆ. ನಾನು ಹೇಳುವುದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುತ್ತಿ ಎಂದು ನನಗೆ ಗೊತ್ತಿದೆ.
ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ.
ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,
ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.