TSK

TSK · ರೋಮಾಪುರದವರಿಗೆ 15:4

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ನಮಗೋಸ್ಕರವೂ ಬರೆದಿರುವುದು.

ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?

“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?

ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.

ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.

¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.