TSK

TSK · ರೋಮಾಪುರದವರಿಗೆ 15:8

مراجع Treasury of Scripture Knowledge في ಕನ್ನಡ IRV.

العودة إلى المقطع

ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.

ಆದರೆ ಯೇಸು ಹೇಳಿದ್ದೇನೆಂದರೆ ‹“ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ”› ಅಂದನು.

ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.

ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.

ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.

ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.

ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.

ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.

ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,

ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?

ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ.

ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.