ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
TSK
TSK · ರೋಮಾಪುರದವರಿಗೆ 2:10
مراجع Treasury of Scripture Knowledge في ಕನ್ನಡ IRV.
ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.
ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.
ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.
ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.
ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.
ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.
ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.
ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”
‹ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›
¶ ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು.
¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›
ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.
ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.
ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.