ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.
TSK
TSK · ರೋಮಾಪುರದವರಿಗೆ 2:19
مراجع Treasury of Scripture Knowledge في ಕನ್ನಡ IRV.
ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.
ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
‹ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!›
¶ ‹“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.›
ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”
ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.
ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.
ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.