TSK

TSK · ರೋಮಾಪುರದವರಿಗೆ 2:5

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.

ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.

ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.

ಆಪತ್ತಿನ ದಿನದಲ್ಲಿ ದುಷ್ಟನು ಉಳಿದು, ಕೋಪವು ತುಂಬಿ ತುಳುಕುವ ದಿನದಲ್ಲಿ ತಪ್ಪಿಸಲ್ಪಡುವನು ಎಂಬುದು ನಿಮಗೆ ಗೊತ್ತಾಗಲಿಲ್ಲವೋ?

ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.

¶ “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.

¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.

¶ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.

“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”

ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.

ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.

ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.