TSK

TSK · ರೋಮಾಪುರದವರಿಗೆ 2:9

مراجع Treasury of Scripture Knowledge في ಕನ್ನಡ IRV.

العودة إلى المقطع

ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.

¶ ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.

ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

¶ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

¶ ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.

¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.

ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.

ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.

ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.

¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?