ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?
TSK
TSK · ರೋಮಾಪುರದವರಿಗೆ 3:20
مراجع Treasury of Scripture Knowledge في ಕನ್ನಡ IRV.
ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.
ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
¶ ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ.
¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.