ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
TSK
TSK · ರೋಮಾಪುರದವರಿಗೆ 3:26
مراجع Treasury of Scripture Knowledge في ಕನ್ನಡ IRV.
ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.