ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
TSK
TSK · ರೋಮಾಪುರದವರಿಗೆ 3:29
مراجع Treasury of Scripture Knowledge في ಕನ್ನಡ IRV.
ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
¶ “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›
ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
¶ ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.