TSK

TSK · ರೋಮಾಪುರದವರಿಗೆ 3:4

مراجع Treasury of Scripture Knowledge في ಕನ್ನಡ IRV.

العودة إلى المقطع

ದೂರದಿಂದ ಸಂಪಾದಿಸಿದ ನನ್ನ ತಿಳಿವಳಿಕೆಯ ಪ್ರಕಾರ, ನನ್ನ ಸೃಷ್ಟಿಕರ್ತನನ್ನು ಧರ್ಮಸ್ವರೂಪನೆಂದು ಹೊಗಳುವೆನು.

ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.

ನೀನು ಪುರಾತನ ಕಾಲದಿಂದಲೂ ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.

‹ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು”› ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.

ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?

¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.

¶ ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.

ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ.

ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.

ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.

ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›