ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
TSK
TSK · ರೋಮಾಪುರದವರಿಗೆ 3:9
مراجع Treasury of Scripture Knowledge في ಕನ್ನಡ IRV.
¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
¶ ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
ನಿನ್ನನ್ನು ಇತರರಿಗಿಂತಲೂ ಶ್ರೇಷ್ಠನನ್ನಾಗಿ ಮಾಡಿದವರು ಯಾರು? ದೇವರಿಂದ ಹೊಂದದೆ ಇರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದಿದ್ದಲ್ಲವೆಂಬಂತೆ ಯಾಕೆ ಕೊಚ್ಚಿಕೊಳ್ಳುತ್ತೀ?
ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.
ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.