ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.
TSK
TSK · ರೋಮಾಪುರದವರಿಗೆ 4:14
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.
ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.
ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.