ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
TSK
TSK · ರೋಮಾಪುರದವರಿಗೆ 4:5
مراجع Treasury of Scripture Knowledge في ಕನ್ನಡ IRV.
ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು,
ಯೇಸುವು, ‹“ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ”› ಎಂದನು.
ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.