ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
TSK
TSK · ರೋಮಾಪುರದವರಿಗೆ 5:15
مراجع Treasury of Scripture Knowledge في ಕನ್ನಡ IRV.
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›
ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.
¶ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.