ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
TSK
TSK · ರೋಮಾಪುರದವರಿಗೆ 5:2
مراجع Treasury of Scripture Knowledge في ಕನ್ನಡ IRV.
ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›
‹ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.›
ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
¶ ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
¶ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,
¶ ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.