‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›
TSK
TSK · ರೋಮಾಪುರದವರಿಗೆ 5:21
مراجع Treasury of Scripture Knowledge في ಕನ್ನಡ IRV.
¶ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ.