¶ “ಯಾವನ ತಲೆಯ ಕೂದಲು ಉದುರಿ ಹೋಗಿ ಅವನು ಬೋಳುತಲೆಯವನಾದರೂ ಅವನು ಶುದ್ಧನೇ.
TSK
TSK · ರೋಮಾಪುರದವರಿಗೆ 6:12
مراجع Treasury of Scripture Knowledge في ಕನ್ನಡ IRV.
ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.
‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.
ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
¶ ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.
¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.