TSK

TSK · ರೋಮಾಪುರದವರಿಗೆ 6:19

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.

ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ

¶ ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.

ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.

ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.

ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.