TSK

TSK · ರೋಮಾಪುರದವರಿಗೆ 7:11

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”

ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.

ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.