TSK

TSK · ರೋಮಾಪುರದವರಿಗೆ 7:4

مراجع Treasury of Scripture Knowledge في ಕನ್ನಡ IRV.

العودة إلى المقطع

ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.

ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, ‹“ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ”› ಅಂದನು.

‹ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು”› ಎಂದು ಹೇಳಿದನು.

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.

ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.

ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.

ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,

ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.

ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು.

ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.