ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
TSK
TSK · ರೋಮಾಪುರದವರಿಗೆ 8:2
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಯೇಸು ‹“ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು”› ಅಂದನು.
‹ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.›
‹ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು”› ಎಂದು ಹೇಳಿದನು.
¶ ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.
ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.
ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.