TSK

TSK · ರೋಮಾಪುರದವರಿಗೆ 8:20

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.

ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು, ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು, ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.

ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.

ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ.

ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.

¶ ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ