‹ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ”› ಅಂದನು.
TSK
TSK · ರೋಮಾಪುರದವರಿಗೆ 8:23
مراجع Treasury of Scripture Knowledge في ಕನ್ನಡ IRV.
ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?
ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.
ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.
ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.