TSK

TSK · ರೋಮಾಪುರದವರಿಗೆ 8:28

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.

ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,

ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.

ದೇಶವೆಲ್ಲಾ ನೊಂದು ನಡುಗುತ್ತದೆ; ಏಕೆಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.

‹ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.›

ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ,

ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.

ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.

ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.

ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.

¶ ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,

ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.

ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.

¶ ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.

ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,

ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.

¶ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.

ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.

ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.