ಆ ದೂತನು ಅವನಿಗೆ, “ಹುಡುಗನ ಮೇಲೆ ಕೈ ಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಸಮರ್ಪಿಸುವುದಕ್ಕೆ ಹಿಂಜರಿಯಲಿಲ್ಲ. ಈಗ ನೀನು ದೇವರಲ್ಲಿ ಭಯಭಕ್ತಿಯುಳ್ಳವನು ಎಂದು ನನಗೆ ಗೊತ್ತಾಯಿತು” ಎಂದು ಹೇಳಿದನು.
TSK
TSK · ರೋಮಾಪುರದವರಿಗೆ 8:32
مراجع Treasury of Scripture Knowledge في ಕನ್ನಡ IRV.
ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›
¶ ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
¶ ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.
ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.