ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.
TSK
TSK · ರೋಮಾಪುರದವರಿಗೆ 9:14
مراجع Treasury of Scripture Knowledge في ಕನ್ನಡ IRV.
ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.
ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!
“ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?
ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು, ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆ ತೋರಿಸುವವನು.
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
¶ ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.