ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ
TSK
TSK · ರೋಮಾಪುರದವರಿಗೆ 9:29
مراجع Treasury of Scripture Knowledge في ಕನ್ನಡ IRV.
ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.
ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.
ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.
ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.
ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.