ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
TSK
TSK · ರೋಮಾಪುರದವರಿಗೆ 9:3
مراجع Treasury of Scripture Knowledge في ಕನ್ನಡ IRV.
ಇದೂ ಇದರಲ್ಲಿರುವುದೆಲ್ಲವೂ ಯೆಹೋವನಿಗೆ ಅರ್ಪಿತವಾದವುಗಳೇ ಎಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಅವಳು ಅಡಗಿಸಿಟ್ಟಿದ್ದಳಲ್ಲಾ.
ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.
¶ “ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.
¶ ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.
ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.