ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು
TSK
TSK · ರೂತಳು 1:17
مراجع Treasury of Scripture Knowledge في ಕನ್ನಡ IRV.
ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,
ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.
ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.
ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.