ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
TSK
TSK · ತೀತನಿಗೆ 1:4
مراجع Treasury of Scripture Knowledge في ಕನ್ನಡ IRV.
ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.
ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.
ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.
ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.
ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.
ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.
¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,
¶ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
¶ ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.