“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
TSK
TSK · ತೀತನಿಗೆ 1:7
مراجع Treasury of Scripture Knowledge في ಕನ್ನಡ IRV.
ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.
ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.
¶ ಕರ್ತನು ಹೇಳಿದ್ದೇನಂದರೆ, ‹“ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?›
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
¶ ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
¶ ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.
¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.