ನನ್ನ ನೀತಿಯನ್ನು ಎಂದಿಗೂ ಬಿಡದೆ ಭದ್ರವಾಗಿ ಹಿಡಿದುಕೊಳ್ಳುವೆನು. ನನ್ನ ಜೀವಮಾನದ ಯಾವ ದಿನಚರಿಯಲ್ಲಿಯೂ, ಮನಸ್ಸಾಕ್ಷಿಯು ತಪ್ಪು ತೋರಿಸುವುದಿಲ್ಲ.
TSK
TSK · ತೀತನಿಗೆ 1:9
مراجع Treasury of Scripture Knowledge في ಕನ್ನಡ IRV.
ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
¶ ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,
ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
¶ ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
¶ ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.
‹ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ›‹ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.›