¶ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
TSK
TSK · ತೀತನಿಗೆ 2:10
مراجع Treasury of Scripture Knowledge في ಕನ್ನಡ IRV.
ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರವಾಗಿ ಪ್ರತಿಫಲವನ್ನು ಕೊಡುವನು. ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ, ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.
ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›
‹ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.›
ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.
¶ ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
¶ ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.
¶ ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
¶ ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.