ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
TSK
TSK · ಜೆಕರ್ಯ 1:2
مراجع Treasury of Scripture Knowledge في ಕನ್ನಡ IRV.
‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’
ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.
ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.
ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.
“ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.
ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸ ಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ.’ ಇದು ಕರ್ತನಾದ ಯೆಹೋವನ ನುಡಿ.”
¶ ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.
¶ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.